ವಿಷಯದ ವಿವರಗಳಿಗೆ ದಾಟಿರಿ

ನಿಲುಮೆ ರವರಿಂದ ಪ್ರಕಟಿತ

21
ಏಪ್ರಿಲ್

ಈ ಶೆಟ್ಟರ್, ‘ಆ ಶೆಟ್ಟರ್’ಗಳಂತಲ್ಲ!


ಸಂತೋಷ್ ತಮ್ಮಯ್ಯ

ತುಂಬಿದ ನ್ಯಾಯಾಲಯದಲ್ಲಿ ನ್ಯಾಯಮೂರ್ತಿ ಚೌಗಲೆ ಸಾಹೇಬರು ಕಲಾಪ ನಡೆಸುತ್ತಿದ್ದರು. ಆಗಿನ್ನೂ ವಕೀಲರುಗಳು ಕಡ್ಡಾಯವಾಗಿ ಕರಿಕೋಟನ್ನು ಧರಿಸಬೇಕೆಂದಿರಲಿಲ್ಲ. ಹಾಗಾಗಿ ಸಭಾಂಗಣದೊಳಗೆ ವಕೀಲರ‍್ಯಾರು? ಕಕ್ಷಿದಾರರ‍್ಯಾರೆಂಬುದು ಗೊತ್ತಾಗುತ್ತಿರಲಿಲ್ಲ. ಅಂದು ನ್ಯಾ. ಚೌಗಲೆಯವರು, ಖ್ಯಾತ ವಕೀಲ ಭೀಮರಾವ್ ಭಂಡಿವಾಡರಿಗೆ ಮೈತಾಗಿಸಿ ಕುಳಿತು ತನ್ನನ್ನೇ ದಿಟ್ಟಿಸುತ್ತಿದ್ದ ಯುವಕನೊಬ್ಬನತ್ತ ಬೊಟ್ಟುಮಾಡಿ ’ಯಾರು ಈ ಹುಡುಗ?’ ಎಂದು ಕೇಳಿದರು. ’ಭಂಡಿವಾಡರು ನನಗೆ ತಿಳಿಯದು ಮಹಾಸ್ವಾಮಿ’ ಎಂದುತ್ತರಿಸಿದರು. ನ್ಯಾಯಮೂರ್ತಿಗಳು ಸಿಡುಕುಮುಖದೊಂದಿಗೆ ಕಲಾಪದಲ್ಲಿ ವ್ಯಸ್ತರಾದರು. ಆ ಯುವಕ ಬೇಸರದಿಂದ ಹೊರನಡೆದ.

ಮರುದಿನ ಕಛೇರಿಗೆ ಬಂದಾಗ ಚೌಗಲೆಯವರಿಗೆ ಲಕೋಟೆಯೊಂದು ಕಾಯುತ್ತಿತ್ತು. ಅದನ್ನು ಓದುತ್ತಲೇ ಚೌಗಲೆ ಸಾಹೇಬರು ಕೋಪದಿಂದ ನಡುಗಲಾರಂಭಿಸಿದರು.

ಆ ಪತ್ರ ಹೀಗಿತ್ತು: ‘ನ್ಯಾಯಾಲಯದೊಳಗೆ ಬಂದು ಕಲಾಪಗಳನ್ನು ವೀಕ್ಷಿಸಲು ಪ್ರತಿಯೊಬ್ಬರಿಗೂ ಹಕ್ಕಿದೆ, ಅಧಿಕಾರವಿದೆ. ಹೊಸದಾಗಿ ವಕೀಲಿ ವೃತ್ತಿ ಆರಂಭಿಸುವವರು ಕಲಾಪಗಳನ್ನು ವೀಕ್ಷಿಸಿ ಅನುಭವವನ್ನು ಹಾಗೂ ಮಾರ್ಗದರ್ಶನವನ್ನು ಪಡೆದುಕೊಳ್ಳಬೇಕಾಗುತ್ತದೆ. ಒಬ್ಬ ತರುಣ ವಕೀಲನಾದ ನಾನು ಹಿರಿಯ ವಕೀಲರ ಪಕ್ಕದಲ್ಲಿ ಕುಳಿತು ಕಲಾಪವನ್ನು ವೀಕ್ಷಿಸಿರುತ್ತೇನೆ. ತಾವು ನೇರವಾಗಿ ನನಗೇ ಪ್ರಶ್ನೆಯನ್ನು ಮಾಡಬಹುದಿತ್ತು. ಆದರೆ ನೀವು ನಾನು ಯಾರೆಂದು ಹಿರಿಯ ವಕೀಲರನ್ನು ಕೇಳಿದಿರಿ. ಆದ್ದರಿಂದ ನಾನು ಏನನ್ನೂ ಹೇಳದೆ ಸುಮ್ಮನಿದ್ದೆ. ಹೀಗೆ ಬೇರೆಯವರಿಗೆ ಪ್ರಶ್ನೆ ಹಾಕಿ ನನ್ನ ಬಗ್ಗೆ ಉತ್ತರ ಪಡೆಯುವ ನಿಮ್ಮ ವಿಧಾನ ನನಗೂ, ವಕೀಲಿ ವೃತ್ತಿಗೂ ಗೈದ ಅಪಮಾನವೆಂದು ತಿಳಿದಿದ್ದೇನೆ ಮತ್ತು ಅಸಮಾಧಾನವನ್ನು ಸೂಚಿಸುತ್ತಿದ್ದೇನೆ. ಇದು ನನ್ನ ಆತ್ಮಗೌರವಕ್ಕೆ ಧಕ್ಕೆಯುಂಟುಮಾಡಿದೆ. ಹೀಗೆ ಮಾಡಲು ನಿಮಗೇನು ಅಧಿಕಾರವಿದೆ? ನೀವು ನಿಮ್ಮ ತಪ್ಪಿಗಾಗಿ ಕ್ಷಮೆ ಕೋರಿ ವಕೀಲಿ ವೃತ್ತಿಯ ಘನತೆಯನ್ನು ಎತ್ತಿಹಿಡಿಯಬೇಕು-ಸದಾಶಿವ ಶಂಕರಪ್ಪ ಶೆಟ್ಟರ್‘

ಈ ಪತ್ರವನ್ನೋದಿದ ನ್ಯಾಯಾಶರು ತಬ್ಬಿಬ್ಬಾದರು. ಅದು ಭಾರೀ ಸುದ್ದಿಯಾಗಿ ಪೇಟೆಯಲ್ಲೂ ಚರ್ಚೆಯಾಯಿತು. ’ಯಾರೀತ? ಯಾರು ಈ ಶೆಟ್ಟರ್?’ ಕೊನೆಗೆ ಏನೋ ನೆನಪು ಮಾಡಿಕೊಂಡ ಚೌಗಲೆಯವರು ಆ ಯುವಕನನ್ನು ಕಛೇರಿಗೆ ಕರೆಸಿಕೊಂಡು ‘ನೀನು ಶಂಕ್ರಪ್ಪ ಶಿವಪ್ಪ ಶೆಟ್ಟರ್ (ಎಸ್.ಎಸ್ ಶೆಟ್ಟರ್) ಮಗನೇನು?‘ ಎಂದು ಕೇಳಿದರು. ಹುಡುಗ ಹೌದೆಂದ!

ಇವೆಲ್ಲಾ ನಡೆದು ಈಗ ಅರ್ಧ ಶತಮಾನಗಳೇ ಕಳೆದಿವೆ. ಆದರೆ ’ಯಾರೀತ? ಯಾರು ಈ ಶೆಟ್ಟರ್?’ ಎಂಬ ಪ್ರಶ್ನೆ ಮತ್ತೊಂದು ರೀತಿಯಲ್ಲಿ ಇಡೀ ರಾಜ್ಯವನ್ನು ಕಾಡುತ್ತಿದೆ! ಎಸ್.ಎಸ್. ಶೆಟ್ಟರ್ ಮಗ ಈ ಸದಾಶಿವ ಶೆಟ್ಟರ್ ಆದರೆ, ಇಂವ ಯಾವ ಶೆಟ್ಟರ್? ಇವರಪ್ಪನೂ ಎಸ್.ಎಸ್. ಶೆಟ್ಟರ್ ಅಲ್ಲವೇ? ಮುಂತಾದ ಪ್ರಶ್ನೆಗಳು ಹಲವರನ್ನು ಕಾಡುತ್ತಿವೆ. ಇವು ಕೇವಲ ಪ್ರಶ್ನೆಗಳು ಮಾತ್ರವಾಗಿದ್ದರೆ ಅದರಲ್ಲೇನೂ ವಿಶೇಷವಿರುತ್ತಿರಲಿಲ್ಲ. ಆದರೆ ಈಗ ಉದ್ಭವಿಸಿದ ಪ್ರಶ್ನೆ ಮೌಲ್ಯಗಳ, ನಿಷ್ಠೆಯ, ಪ್ರಾಮಾಣಿಕತೆಯ ಪ್ರಶ್ನೆ. ಇದೀಗ ಚರ್ಚೆಯಾಗುತ್ತಿರುವ ಅಧಿಕಾರದಾಸೆಯ ಶೆಟ್ಟರನ್ನು ಕೆಲವರು ವಕೀಲ ಸದಾಶಿವ ಶೆಟ್ಟರರ ಮಗ ಎಂದುಕೊಂಡಿದ್ದಾರೆ. ಜನಸಂಘದ ಮಹಾ ನಾಯಕರ ಗರಡಿಯಲ್ಲಿ ಪಳಗಿದ ಸದಾಶಿವ ಶೆಟ್ಟರ್ ಕುಡಿಯೇಕೆ ಹೀಗೆ ಮಾಡಿದರು ಎಂದು ನೊಂದುಕೊಂಡವರಿದ್ದಾರೆ. ಆದರೆ ಸದಾಶಿವ ಶೆಟ್ಟರ್ ಮನೆತನದ ಇತಿಹಾಸವನ್ನು ಅಧ್ಯಯನ ಮಾಡಿದರೆ ಅಲ್ಲಿ ಮೂರು ಶತಮಾನಗಳಿಂದಲೂ ಪ್ರಾಮಾಣಿಕರು, ಧರ್ಮರಕ್ಷಣೆಗೆ ಬದುಕು ಮುಡಿಪಾಗಿಟ್ಟವರು, ಸಮಾಜಕ್ಕಾಗಿ ಬದುಕಿದವರು ಮಾತ್ರ ಕಾಣುತ್ತಾರೆಯೇ ಹೊರತು ಅಧಿಕಾರಕ್ಕಾಗಿ ಹಪಹಪಿಸಿದ, ಧನದಾಹಿ ’ಶೆಟ್ಟರ್’ ಕಾಣಿಸುವುದಿಲ್ಲ. ಹಾಗಾದರೆ ಬಣ್ಣಬದಲಿಸಿದ ಈ ಶೆಟ್ಟರ್ ಯಾರು?

ಅದರ ಕಥೆ ರಾಜಮೌಳಿ ಸಿನೆಮಾದಂತೆ, ತ.ಸು. ಶಾಮರಾಯರ ’ಮೂರು ತಲೆಮಾರು’ ಪುಸ್ತಕದಂತೆ ರೋಚಕವಾಗಿದೆ.

ಲಭ್ಯ ದಾಖಲೆಗಳ ಪ್ರಕಾರ ಶೆಟ್ಟರ್ ವಂಶದ ಇತಿಹಾಸ ಆರಂಭವಾಗುವುದು ೧೬ನೇ ಶತಮಾನದ ಗೋಕಾಕದ ಕಾಡಪ್ಪ ಶೆಟ್ಟರ್ ಎಂಬ ಶಿವಭಕ್ತರಿಂದ. ಶರಣತತ್ತ್ವಗಳ ಪ್ರಕಾರ ಬದುಕಿದ ಅನುಕೂಲಸ್ಥ ಕಾಡಪ್ಪನವರಿಗೆ ಇಬ್ಬರು ಮಕ್ಕಳು. ಎರಡನೆಯ ಮಗ ಬಸಪ್ಪ ಶೆಟ್ಟರ್ ತಂದೆಯಂತೆಯೇ ಶಿವಭಕ್ತ. ಅವರ ಸಮಾಜಸೇವೆ ಮತ್ತು ಸಾತ್ತ್ವಿಕ ಗುಣವನ್ನು ಗದಗಿನ ತೋಂಟದಾರ್ಯ ಸ್ವಾಮಿಗಳು, ಸವಣೂರಿನ ನವಾಬರು ಮತ್ತು ಜಡೆ ಮಠದ ಸ್ವಾಮಿಗಳು ಮೆಚ್ಚಿ ಗೌರವದ ಸ್ಥಾನಮಾನಗಳನ್ನು ನೀಡಿದ್ದರು. ಗುರುಸಿದ್ದೇಶ್ವರ ಸ್ವಾಮಿಗಳನ್ನು ಚಿತ್ರದುರ್ಗದಿಂದ ಕರೆಸಿ ಹುಬ್ಬಳ್ಳಿಯಲ್ಲಿ ಮೂರುಸಾವಿರ ಮಠವನ್ನು ಅವರು ನಿರ್ಮಿಸಿದ್ದರು. ಮುಂದೆ ಮಠಕ್ಕೆ ಅವರ ಮೂರನೆಯ ಮಗ ಗುರುಸಿದ್ಧಪ್ಪ ಶೆಟ್ಟರ್ ಮಠಾಧಿಪತಿಯೂ ಆದರು. ಇವರು ಕಾಡಪ್ಪ ಶೆಟ್ಟರ್ ವಂಶದ ಮೂರನೇ ತಲೆಮಾರು. ಇವರ ನಂತರದ ಐದನೇ ತಲೆಮಾರಿನಲ್ಲಿ ಜನಿಸಿದವರೇ ಶಂಕ್ರಪ್ಪ ಶಿವಪ್ಪ ಶೆಟ್ಟರ್ ಅಥವಾ ಎಸ್.ಎಸ್. ಶೆಟ್ಟರ್. ಇವರೇ ನ್ಯಾಯಾಶರಿಗೆ ಕ್ಷಮೆ ಕೇಳಬೇಕೆಂದು ಒತ್ತಾಯಿಸಿದ ಸ್ವಾಭಿಮಾನಿ ಸದಾಶಿವ ಶೆಟ್ಟರ್ ತಂದೆ. ವಕೀಲರಾಗಿದ್ದ ಎಸ್.ಎಸ್. ಶೆಟ್ಟರ್ ಹುಬ್ಬಳ್ಳಿ-ಧಾರವಾಡ ಸೀಮೆಯಲ್ಲಿ ಹೆಸರಾಂತ ವ್ಯಕ್ತಿ. ಶೆಟ್ಟರ್ ಚಾಳ್‌ಗೆ ಬಂದ ಯಾರನ್ನೂ ಬರಿಗೈಯಲ್ಲಿ ಕಳುಹಿಸದ ಕೊಡುಗೈ ದಾನಿ. ಧಾರವಾಡ ಸೀಮೆಯ ಹಳ್ಳಿಗಳಿಂದ ಮಕ್ಕಳನ್ನು ಕರೆತಂದು ತಮ್ಮ ಮನೆಯಲ್ಲಿಟ್ಟು ಓದಿಸುತ್ತಲೇ ತಮ್ಮ ೩೪ನೇ ವಯಸ್ಸಿನಲ್ಲಿ ಕಾಲವಾದರು. ಅವರು ಕಾಲವಾಗುವ ಕೆಲ ವರ್ಷಗಳ ಮುನ್ನ ಕಲಘಟಗಿ, ಮಿಸರಕೋಟಿಗಳಿಂದ ಬಡಮಕ್ಕಳನ್ನು ತಂದು ತಮ್ಮ ಮನೆಯಲ್ಲಿಟ್ಟುಕೊಂಡು ಓದಿಸುತ್ತಿದ್ದರು. ಹಾಗೆ ಬಂದ ಒಬ್ಬ ಬುದ್ಧಿವಂತ ಹುಡುಗ ಶಿವಪ್ಪ ಶಿವಮೂರ್ತೆಪ್ಪ ಶೆಟ್ಟರ್. ಮುಂದೆ ಇವರೂ ಎಸ್.ಎಸ್. ಶೆಟ್ಟರ್ ಎಂದೇ ಖ್ಯಾತರಾದರು. ಈ ಶಿವಪ್ಪ ಶಿವಮೂರ್ತೆಪ್ಪ ಶೆಟ್ಟರ್ ಅವರಿಗೆ ತನ್ನನ್ನೂ ಜನ ಎಸ್.ಎಸ್. ಶೆಟ್ಟರ್ ಎಂದು ಕರೆಯುವುದು ಹೆಮ್ಮೆ ತರುತ್ತಿತ್ತು ಮತ್ತವರು ಅನ್ನ-ವಿದ್ಯೆ ನೀಡಿದ ಶೆಟ್ಟರ್ ಮನೆತನಕ್ಕೆ ನಿಷ್ಠರೂ ಆಗಿದ್ದರು. ಹಿರಿಯ ಎಸ್.ಎಸ್. ಶೆಟ್ಟರರ ಅಪಾರ ಆಸ್ತಿಗೆ ಕಿಂಚಿತ್ತೂ ಅಪಾಯ ಬರದಂತೆ ಕಾಪಾಡಿದವರು ಈ ಕಿರಿಯ ಎಸ್.ಎಸ್. ಶೆಟ್ಟರ್. ಹಿರಿಯ ಎಸ್.ಎಸ್ ಶೆಟ್ಟರರ ಸ್ವಂತ ಮಗ ಸದಾಶಿವ ಶೆಟ್ಟರ್ ವಕೀಲಿ ವೃತ್ತಿ ಹಿಡಿಯುವವರೆಗೂ ರಕ್ತಸಂಬಂಧಿಯಲ್ಲದ ಕಿರಿಯ ಎಸ್.ಎಸ್. ಶೆಟ್ಟರ್ ಆ ಕುಟುಂಬದ ಸೇವೆ ಮಾಡುತ್ತಾ ಸಾರ್ಥಕ ಬದುಕನ್ನು ಬದುಕಿದರು.

ಇತ್ತ ಸದಾಶಿವ ಶೆಟ್ಟರ್ ಯಶಸ್ವಿ ವಕೀಲರಾಗಿ, ವಿವಾಹವಾಗಿ ಅವರಿಗೆ ಐವರು ಮಕ್ಕಳೂ ಆದರು. ಜೊತೆಗೆ ಕಾಂಗ್ರೆಸ್ ಕಾರ್ಯಕರ್ತರಾದರು. ಅತ್ತ ಕಾಡಪ್ಪ ಶೆಟ್ಟರ್ ವಂಶದವರಲ್ಲದ ಶಿವಪ್ಪ ಶಿವಮೂರ್ತೆಪ್ಪ ಶೆಟ್ಟರ್ ಯಾನೆ ಕಿರಿಯ ಎಸ್.ಎಸ್. ಶೆಟ್ಟರ್ ಕೂಡ ಸಂಸಾರಸ್ಥರಾಗಿ ಅವರಿಗೂ ಮಕ್ಕಳಾದರು. ಅವರಲ್ಲೊಬ್ಬರು ಮುಂದೆ ಬಿಜೆಪಿಯಲ್ಲಿ ಸಕಲ ಅಧಿಕಾರಗಳನ್ನು ಅನುಭವಿಸಿ ಜಗದೀಶ ಶೆಟ್ಟರ್ ಎಂದು ಖ್ಯಾತರಾದರು.

ಕಾಂಗ್ರೆಸಿನಲ್ಲಿ ಸಕ್ರಿಯರಾಗಿದ್ದ ವಕೀಲ ಸದಾಶಿವ ಶೆಟ್ಟರಿಗೆ ಕ್ರಮೆಣ ಕಾಂಗ್ರೆಸಿಗರಿಗೆ ಶ್ರದ್ಧೆಯಿಲ್ಲ, ಕ್ರಿಯಾಶೀಲತೆಯಿಲ್ಲ ಎನಿಸತೊಡಗಿತು. ಅಧಿಕಾರದಾಹ, ಜಾತೀಯತೆ ಮತ್ತು ಅಲ್ಪಸಂಖ್ಯಾತರ ಓಲೈಕೆಗಳು ರಾಷ್ಟ್ರಭಾವಕ್ಕೆ ಅಪಾಯವನ್ನುಂಟುಮಾಡುತ್ತವೆ ಎಂಬುದು ಅವರಿಗೆ ಅರಿವಾಗತೊಡಗಿತು. ತಾನು ಇಲ್ಲೇ ಉಳಿದರೆ ಕಾಂಗ್ರೆಸಿನಂತೆ ನಿಷ್ಕ್ರಿಯನಾಗಿಬಿಡುವೆ ಎಂಬ ಭಯ ಕಾಡತೊಡಗಿತು. ಆಗ ಅವರನ್ನು ಸೆಳೆದಿದ್ದು ಡಾ.ಶ್ಯಾಮಪ್ರಸಾದ್ ಮುಖರ್ಜಿ ಮತ್ತು ದೀನದಯಾಳ ಉಪಾಧ್ಯಾಯರ ಚಿಂತನೆಗಳು. ಅನಂತರ ಹಿಂದೆಮುಂದೆ ಯೋಚಿಸದ ಸದಾಶಿವ ಶೆಟ್ಟರ್ ಜನಸಂಘ ಸೇರಿದರು. ಜಗನ್ನಾಥರಾವ್ ಜೋಷಿ, ಭಾವುರಾವ್ ದೇಶಪಾಂಡೆ ಹಾಗೂ ಗದಗಿನ ಡಾ. ರಾಮಚಂದ್ರ ಅನಂತರಾವ ಜಾಲಿಹಾಳರ ಮಾರ್ಗದರ್ಶನದಿಂದ ಆರೆಸ್ಸೆಸ್ಸಿನ ಸಂಪರ್ಕಕ್ಕೂ ಬಂದರು. ೧೯೬೨ರಲ್ಲಿ ಹುಬ್ಬಳ್ಳಿಯಿಂದ, ೧೯೬೪ರಲ್ಲಿ ಧಾರವಾಡದಿಂದ ವಿಧಾನಸಭೆಗೆ ಸ್ಪರ್ಧಿಸಿ ಸೋತರು. ೧೯೬೭ರ ಚುನಾವಣೆಯಲ್ಲಿ ಹುಬ್ಬಳ್ಳಿಯಿಂದ ಸ್ಪರ್ಧಿಸಿ ಗೆದ್ದು ದಕ್ಷಿಣ ಭಾರತದ ಜನಸಂಘದ ಮೊದಲ ಶಾಸಕ ಎನಿಸಿಕೊಂಡರು. ತಡವಾಗಿ ಜನಸಂಘ ಸೇರಿದರೂ ನಿಷ್ಠಾವಂತ ಕಾರ್ಯಕರ್ತರಾದರು. ಪಕ್ಷದ ಕಾರ್ಯಕ್ಕೆಂದೇ ಪ್ರಿಂಟಿಂಗ್ ಪ್ರೆಸ್ ತೆರೆದರು. ಮನೆಯಲ್ಲಿ ಊಟಹಾಕಿ ಪಕ್ಷ ಕಟ್ಟಿದರು. ದೀನದಯಾಳರಂಥ ರಾಷ್ಟ್ರನಾಯಕರ ನಿಕಟವರ್ತಿಗಳಾದರು. ಹುಬ್ಬಳ್ಳಿ ಆಸ್ಪತ್ರೆ ನಿರ್ಮಾಣದ ನಂತರ ನಿರ್ಗತಿಕರಾದ ಕಾರ್ಮಿಕರ ಪರವಾಗಿ ಹೋರಾಟ ಮಾಡಿ ವಸತಿ ಕಲ್ಪಿಸಿದರು. ರೈತಹೋರಾಟಗಳನ್ನು ಸಂಘಟಿಸಿದರು, ಕಟ್ಟಡ ತೆರಿಗೆಯ ವಿರುದ್ಧ ಧರಣಿ ಕುಳಿತರು. ಬೆಲೆ ಏರಿಕೆ, ಪಡಿತರ ತಾರತಮ್ಯದ ವಿರುದ್ಧ ಬೀದಿಗಿಳಿದು ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ದೀನದಯಾಳ ಉಪಾಧ್ಯಾಯರು ಉತ್ತರ ಕರ್ನಾಟಕ ಪ್ರವಾಸ ಕೈಗೊಂಡಾಗ ಅವರ ಜೊತೆಗೂಡಿ ಸಂಘಟನೆ ಮಾಡಿದರು. ಹಿಡಿದ ಕಾರ್ಯವನ್ನು ವೇಗದಿಂದ ಮುಗಿಸುತ್ತಿದ್ದ ಸದಾಶಿವ ಶೆಟ್ಟರ್ ತಮ್ಮ ಬದುಕನ್ನೂ ತುರಾತುರಿಯಲ್ಲಿ ಮುಗಿಸಿಬಿಟ್ಟರು. ೧೯೬೮ರಲ್ಲಿ ತಮ್ಮ ೩೬ನೇ ವಯಸ್ಸಿನಲ್ಲಿ ಶಾಸಕರಾಗಿದ್ದಾಗಲೇ ಕಾಲವಾದರು. ಅಲ್ಲಿಗೆ ಶೆಟ್ಟರ್ ಕುಟುಂಬದ ರಾಜಕೀಯ ಬದುಕೂ ಅಂತ್ಯವಾಯಿತು.

ಇವರ ನಿಧನದಿಂದ ತೆರವಾದ ಸ್ಥಾನಕ್ಕೆ ಕಾರ್ಯಕರ್ತರು ಶಿವಪ್ಪ ಶಿವಮೂರ್ತೆಪ್ಪ ಶೆಟ್ಟರ್ (ಕಿರಿಯ ಎಸ್.ಎಸ್ ಶೆಟ್ಟರ್)ರನ್ನು ಅಭ್ಯರ್ಥಿಯಾಗಿ ನಿಲ್ಲಿಸಿದರು. ಆದರೆ ಅವರು ಗೆಲ್ಲಲಿಲ್ಲ. ತಮಗೆ ಅನ್ನ ಕೊಟ್ಟ ಸದಾಶಿವ ಶೆಟ್ಟರ್ ಕುಟುಂಬದ ಮೌಲ್ಯಕ್ಕೆ ಅನುಗುಣವಾಗಿ ಬದುಕಿದರು. ಆದರೆ ಕಿರಿಯ ಎಸ್.ಎಸ್. ಶೆಟ್ಟರ್ ಹಾಗೆ ಬದುಕಿದರೆಂದು ಅವರ ಮಗ ಬದುಕಬೇಕೆಂದಿದೆಯೇ?

ಹೇಗೂ ಹುಬ್ಬಳ್ಳಿ-ಧಾರವಾಡದಲ್ಲಿ ಶೆಟ್ಟರ್ ಮನೆತನಕ್ಕೆ ಒಂದು ಹವಾ ಇತ್ತು. ಸದಾಶಿವ ಶೆಟ್ಟರರು ಕಾಲವಾದಾಗ ಒಂದು ಲಕ್ಷಕ್ಕೂ ಹೆಚ್ಚು ಜನ ಶವಯಾತ್ರೆಯಲ್ಲಿ ಭಾಗಿಯಾಗಿದ್ದರು. ಈ ಎಲ್ಲಾ ಕಾರಣಗಳಿಂದ ಕಾಂಗ್ರೆಸಿಗೆ ಠಕ್ಕರ್ ಕೊಡಲು ಶೆಟ್ಟರ್ ಕುಟುಂಬದ ಯಾರಾದರೂ ಅ‘ರ್ಥಿಯಾದರೆ ಬಿಜೆಪಿ ಗೆಲ್ಲಲಿದೆ ಎಂಬ ಮಾತು ರಾಜಕೀಯ ವಲಯದಲ್ಲಿ ಪ್ರಚಲಿತದಲ್ಲಿತ್ತು. ಆದರೆ ಸದಾಶಿವ ಶೆಟ್ಟರರ ಮಕ್ಕಳಾರೂ ರಾಜಕೀಯಕ್ಕೆ ಬರಲಾರೆವು ಎಂದು ಸುಮ್ಮನಾಗಿಬಿಟ್ಟರು. ಆ ಸಮಯದಲ್ಲಿ ರಾಜಕೀಯ ನಾಯಕರ ಕಣ್ಣಿಗೆ ಆಕಸ್ಮಿಕವಾಗಿ ಬಿದ್ದವರೇ ಶಿವಪ್ಪ ಶಿವಮೂರ್ತೆಪ್ಪ ಶೆಟ್ಟರ್ ಎಂಬ ಕಿರಿಯ ಎಸ್.ಎಸ್ ಶೆಟ್ಟರ್ ಮಗ. ಅನಂತರ ಆತ ಹಿಂದಿರುಗಿ ನೋಡಲಿಲ್ಲ. ಒಂದೊಂದಾಗಿ ರಾಜಕೀಯ ಮೆಟ್ಟಿಲುಗಳನ್ನೇರತೊಡಗಿದರು. ಶೆಟ್ಟರ್ ಹೆಸರೇ ಅವರಿಗೆ ವಿಜಯವನ್ನು ತಂದುಕೊಡುತ್ತಿತ್ತು. ಹಾಗಾಗಿ ಆಧುನಿಕ ಶೆಟ್ಟರರ ರಾಜಕೀಯ ಬದುಕು ಸುಲಭವಾಯಿತು. ಕಾಲಕ್ರಮೇಣ ಹಳೆಯ ಶೆಟ್ಟರ್ ಮೌಲ್ಯಗಳು ಅವಳಿ ನಗರದಲ್ಲಿ ದಂತಕಥೆಗಳಾಗಿ ಜನಪ್ರಿಯವಾದಾಗ ಈ ಶೆಟ್ಟರರಿಗೆ ತಾನೇ ಸಿದ್ಧಾಂತ, ತಾನೇ ಬಿಜೆಪಿ ಎಂಬ ಭ್ರಮೆಯೂ ಬೆಳೆಯಿತು. ಕಾಡಪ್ಪ ಶೆಟ್ಟರ್ ಮನೆತನದ ಪ್ರಭಾವಳಿಗಳಿಲ್ಲದೆಯೇ ತಾನು ಮೇಲೆ ಬಂದೆ ಎಂಬ ಅಹಂಕಾರವೂ ಬಂತು. ಯಡಿಯೂರಪ್ಪ ಸರ್ಕಾರವಿದ್ದಾಗ ಹುಬ್ಬಳ್ಳಿಯಲ್ಲಿ ಸದಾಶಿವ ಶೆಟ್ಟರರ ಪ್ರತಿಮೆ ನಿರ್ಮಾಣ ಮಾಡಬೇಕೆಂಬ ಕೂಗಿಗೆ ಈ ಶೆಟ್ಟರ್ ಸೊಪ್ಪು ಹಾಕಲಿಲ್ಲ, ಕೊನೆಗೆ ಅಭಿಮಾನಿಗಳೇ ಪುಟ್ಟ ಪ್ರತಿಮೆ ನಿರ್ಮಿಸಿದಾಗ ಕೆಲವರು ಅದಕ್ಕೆ ಅಡ್ಡಗಾಲನ್ನೂ ಹಾಕಿದರು! ಸರ್ಕಾರ ಸದಾಶಿವ ಶೆಟ್ಟರ್ ಕುರಿತ ಪುಸ್ತಕ ಬಿಡುಗಡೆ ಮಾಡಿದಾಗ ಮಂತ್ರಿ ಶೆಟ್ಟರರು ದೊಡ್ಡಮನೆಯ ಶೆಟ್ಟರರ ಮಕ್ಕಳನ್ನು ಸೌಜನ್ಯಕ್ಕೂ ವೇದಿಕೆಗೆ ಕರೆಯದೆ ನೋವು ಕೊಟ್ಟರು. ಅಂದರೆ ಬಿಜೆಪಿಯಲ್ಲಿದ್ದಾಗಲೇ ಈ ಶೆಟ್ಟರ್ ಒಳಗೊಳಗೇ ಹುನ್ನಾರ, ಕುಟಿಲತೆ, ಧೂರ್ತತನಗಳನ್ನು ತುಂಬಿಕೊಂಡಿದ್ದರು. ಆದರೆ ಮುಖವಾಡವಾದರೂ ಎಷ್ಟು ದಿನ ಮರೆಯಲ್ಲಿದ್ದೀತು? ಈಗ ಅದು ಕಳಚಿದೆ. ಸಂಘದ ಪ್ರಚಾರಕರ ಬಗ್ಗೆ ಅಪಸವ್ಯ ನುಡಿಯುವಷ್ಟು ಪತನಕ್ಕೆ ತಲುಪಿದೆ. ಆದರೆ ಇದರಲ್ಲೇನೂ ಆಶ್ಚರ್ಯ ಕಾಣಿಸುತ್ತಿಲ್ಲ. ಏಕೆಂದರೆ ಇವರು ಕಾಡಪ್ಪ ಶೆಟ್ಟರರಂತೆ ಬದುಕಿರಲೇ ಇಲ್ಲ! ಹಾಗಾಗಿ ಅಚ್ಚರಿಯೇಕೆ ಪಡಬೇಕು? ಅಲ್ಲದೆ ತಂದೆ ಶಿವಪ್ಪ ಶಿವಮೂರ್ತೆಪ್ಪ ಶೆಟ್ಟರ್ ಬೇರೆ ಕಾಲವಾಗಿದ್ದರು. ಇನ್ನು ಈ ಶೆಟ್ಟರರಿಗೆ ಯಾರ ಹಂಗೂ ಇರಲಿಲ್ಲ. ಹಾಗಾಗಿ ಪಕ್ಷ ಬಿಡುವಾಗಲೂ ಅವರಿಗೆ ನಾಚಿಕೆಯಾಗಲಿಲ್ಲ.

ವಿಪರ್ಯಾಸವೆಂದರೆ ಬಹುತೇಕ ಜನ ಇಂದಿಗೂ ಬೆನ್ನುಹಾಕಿಹೋದ ಈ ಶೆಟ್ಟರರನ್ನು ಸದಾಶಿವ ಶೆಟ್ಟರರ ಪುತ್ರ, ದೀನದಯಾಳರ ಸಂಪರ್ಕದಲ್ಲಿದ್ದ ಮನೆಯಾಂವ ಎಂದೇ ಅಂದುಕೊಂಡಿದ್ದಾರೆ! ಇದು ಹೇಗಾಯಿತೆಂದರೆ ಬಿಸ್ಲೆರಿ ನೀರಿನ ಬಾಟಲ್ ಯಶಸ್ವಿಯಾದಾಗ ಅದೇ ಹೆಸರನ್ನು ಹೋಲುವ ನಕಲಿ ನೀರಿನ ಬಾಟಲ್‌ಗಳು ಬಂದವಲ್ಲ ಹಾಗೆ!

ಗ್ರಂಥಋಣ: ಸಂಸದೀಯಪಟು-ಸದಾಶಿವ ಎಸ್. ಶೆಟ್ಟರ್-ಗ್ರಂಥಾಲಯ ಉಪಸಮಿತಿ, ಬೆಂಗಳೂರು

ಕೃಪೆ : ಹೊಸದಿಗಂತ

8
ಜುಲೈ

ಭಾರತ ಮತ್ತೊಂದು ಪಾಕಿಸ್ತಾನವಾಗಬಾರದು ಎಂದರೆ…

– ರಾಕೇಶ್ ಶೆಟ್ಟಿ

ಜೂನ್ 28ರ ಮಧ್ಯಾಹ್ನ ರಾಜಸ್ಥಾನದ ಉದಯಪುರದಲ್ಲಿ ನಡೆದ ಭೀಕರ ಹತ್ಯೆಯ ಘಟನೆಯಿಂದ ಸಾಮಾನ್ಯ ಹಿಂದೂ ತಲ್ಲಣಗೊಂಡಿದ್ದಾನೆ, ಆಕ್ರೋಷಿತನಾಗಿದ್ದಾನೆ. ‘ನಂಬಿಸಿ ಕತ್ತು ಕೊಯ್ಯುವುದು’ ಎಂದರೇನು ಎನ್ನುವುದನ್ನು ಇಸ್ಲಾಮಿಕ್ ಉಗ್ರರು ಕಮಲೇಶ್ ತಿವಾರಿಯ ನಂತರ, ಉದಯಪುರದ ಬಡ ಟೈಲರ್ ಕನ್ನಯ್ಯ ಲಾಲ್ ಅವರ ಹತ್ಯೆಯ ಮೂಲಕ ತೋರಿಸಿಕೊಟ್ಟಿದ್ದಾರೆ. ಕಮಲೇಶ್ ತಿವಾರಿಯವರ ಹಂತಕರಾದ ಫರಿದುದ್ಡೀನ್ ಶೇಖ್, ಅಶ್ಫಾಖ್ ಶೇಖ್ ಅವರು ತಮ್ಮನ್ನು ಹಿಂದೂಗಳೆಂದು ಫೇಸ್ಬುಕ್ಕಿನಲ್ಲಿ ಪರಿಚಯ ಮಾಡಿ, ಸ್ನೇಹ ಸಂಪಾದಿಸಿ, ಕೇಸರಿ ಕುರ್ತಾ ಧರಿಸಿ, ಸ್ವೀಟ್ ಬಾಕ್ಸಿನೊಳಗೆ ರಿವಾಲ್ವರ್ ಹಾಗೂ ಚಾಕು ಹಿಡಿದು ಬಂದಿದ್ದರು. ಕಮಲೇಶ್ ತಿವಾರಿಯವರ ಸಹಾಯಕನನ್ನು ಸಿಗರೇಟ್ ತರುವಂತೆ ಕಳುಹಿಸಿ, ಏಕಾಂಗಿಯಾಗಿದ್ದ ಕಮಲೇಶ್ ತಿವಾರಿಯರ ಮೇಲೆ ಎರಗಿ ಕತ್ತು ಸೀಳಿ, ಗುಂಡು ಹಾರಿಸಿ ಕೊಲ್ಲಲಾಗಿತ್ತು. ಮರಣೋತ್ತರ ವರದಿಯ ಪ್ರಕಾರ 15 ಬಾರಿ ಚುಚ್ಚಿ ಕೊಲ್ಲಲಾಗಿತ್ತು. 1926ರಲ್ಲಿ ಅಬ್ದುಲ್ ರಶೀದ್ ಕೂಡ ಹೀಗೆಯೇ ಸಂಭಾವಿತನಂತೆ ಬಂದು, ಸಹಾಯಕನನ್ನು ನೀರು ತರಲು ಕಳುಹಿಸಿ ಸ್ವಾಮಿ ಶ್ರದ್ದಾನಂದರನ್ನು ಗುಂಡಿಕ್ಕಿ ಕೊಂದಿದ್ದ.

ಕನ್ನಯ್ಯ ಲಾಲ್ ಅವರ ಹತ್ಯೆ ನಡೆದಿದ್ದೂ ಹೀಗೆಯೇ. ಬಟ್ಟೆ ಹೊಲಿಸುವವರ ಸೋಗಿನಲ್ಲಿ ಬಂದ ಮೊಹಮ್ಮದ್ ಗೌಸ್ , ಮೊಹಮ್ಮದ್ ರಿಯಾಜ್ , ಅಳತೆ ತೆಗೆದುಕೊಳ್ಳುವಾಗ ಕನ್ನಯ್ಯಲಾಲ್ ಅವರ ಕತ್ತು ಕೊಯ್ದರು. 21 ಬಾರಿ ಚುಚ್ಚಿ ಕೊಲ್ಲಲಾಗಿದೆ ಎಂದಿದೆ ಮರಣೋತ್ತರ ವರದಿ. ಬಹುಶಃ ಹಂತಕರು ವಿಡಿಯೋವನ್ನು ವೈರಲ್ ಮಾಡದೇ ಇದ್ದಿದ್ದರೆ, ರಾಜಸ್ಥಾನದ ಕಾಂಗ್ರೆಸ್ ಸರ್ಕಾರ ಇದಕ್ಕೊಂದು ಬೇರೆ ಕತೆ ಕಟ್ಟಿ ಮುಗಿಸುತ್ತಿತ್ತು. ನಂತರ ತಿಳಿದು ಬಂದ ವಿಷಯದ ಪ್ರಕಾರ, ಕನ್ನಯ್ಯ ಲಾಲ್ ಅವರು ಕೇವಲ ನೂಪುರ್ ಶರ್ಮ ಅವರನ್ನು ಬೆಂಬಲಿಸಿದ ಕಾರಣಕ್ಕೆ ಬಂಧನವಾಗಿ, ಬಿಡುಗಡೆಯಾಗಿ ಬಂದ ನಂತರ, ತನ್ನ ಪ್ರಾಣಕ್ಕೆ ಅಪಾಯವಿದೆ ಎಂದು ಪೋಲಿಸ್ ರಕ್ಷಣೆ ಕೋರಿದ್ದರು. ಒಬ್ಬ ಬಡವನ ಮನವಿಯನ್ನು ಪೋಲಿಸರು ಹೇಗೆ ತಾತ್ಸಾರದಿಂದ ಸ್ವೀಕರಿಸುತ್ತಾರೋ, ಹಾಗೆಯೇ ಸ್ವೀಕರಿಸಿ ಕಸದ ಬುಟ್ಟಿಯ ಜಾಗ ತೋರಿಸಿದರು. ಅಂದ ಹಾಗೆ, ಕನ್ನಯ್ಯ ಲಾಲ್ ಅವರ ಕುರಿತ ಮಾಹಿತಿಯನ್ನು ಹಂಚಿಕೊಂಡವನು ಯಾರೋ ಅನಾಮಿಕನಲ್ಲ. ಕನ್ನಯ್ಯ ಅವರ ಪಕ್ಕದ ಮನೆಯ ನಜೀಂ. ನಜೀಮನಿಗೆ ನೆರೆ ಮನೆಯವನ ಸ್ನೇಹಕ್ಕಿಂತ ಆತನ ಇಸ್ಲಾಂ ಮುಖ್ಯವಾಗಿತ್ತು. ನಂಬಿ ಕೆಟ್ಟವನು ಕನ್ನಯ್ಯ. ಕಾಶ್ಮೀರದ ಪಂಡಿತರ ಹತ್ಯೆಯಲ್ಲೂ ನೆರೆಮನೆಯವರೇ ಹೇಗೆ ಸಹಾಯ ಮಾಡಿದ್ದರು ಎನ್ನುವುದನ್ನು, ಕಾಶ್ಮೀರ್ ಫೈಲ್ಸ್ ಸಿನಿಮಾದಲ್ಲಿ ಇಡೀ ಭಾರತವೇ ನೋಡಿದೆ. ಜೊತೆಗಿದ್ದವರಿಗೆ ಮೂಹೂರ್ತ ಇಡುವ ಧೂರ್ತ ಮನಸ್ಥಿತಿಯನ್ನು ಇವರು ಕಲಿಯುವುದು ಎಲ್ಲಿಂದ?

ಮತ್ತಷ್ಟು ಓದು »
5
ಆಗಸ್ಟ್

ರಾಮಜನ್ಮ ಭೂಮಿ ಚಳವಳಿ – ನನ್ನ ಬಾಲ್ಯದ ನೆನಪಿನಲ್ಲಿ

– ಅಜಿತ್ ಶೆಟ್ಟಿ ಹೆರಂಜೆ

ಚಿತ್ರ ಕೃಪೆ: ಕಲಾವಿದರದ್ದು. ಕೇರಳದ ಕಲಾವಿದರೊಬ್ಬರ ಕುಂಚದಲ್ಲಿ ಅರಳಿದ ಅಯೋಧ್ಯೆ ಭೂಮಿಪೂಜೆ

ಅಯೋದ್ಯೆಯ ರಾಮ ಜನ್ಮ ಭೂಮಿಯ ಹೋರಾಟ ನನ್ನ ವಯೋಮಾನದವರಿಗೆ ನಮ್ಮ ಕಣ್ಣ ಮುಂದೆಯೇ ನಿರ್ಮಾಣವಾದ ಇತಿಹಾಸ.ಮಹರ್ಷಿ ವಾಲ್ಮೀಕಿಯವರು ಬರೆದ ರಾಮಾಯಣ ಒಂದು ಕಡೆಯಾದರೆ ಇನ್ನೊಂದು ಕಡೆ ಆಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಮಂದಿರ ಕಟ್ಟಲು ಭಾರತದ ಹಿಂದೂ ಸಮಾಜ ಮಾಡಿದ ಸುಮಾರು 500 ವರ್ಷಗಳ ಸುಧೀರ್ಘ ಹೋರಾಟ. ಈ ಹೋರಾಟದ ಇತಿಹಾಸ ಕೂಡ ವಾಲ್ಮೀಕಿಯವರು ರಾಮಾಯಣಕ್ಕಿಂತ ಭಿನ್ನವಾಗಿರಲಿಲ್ಲ. ತ್ರೇತಾ ಯುಗದಲ್ಲಿ ವನವಾಸ ಮುಗಿಸಿ, ರಾವಣ ಸಂಹಾರ ಮಾಡಿ ಅಯೋಧ್ಯೆಗೆ ಮರಳಿದ ಪ್ರಭು ಶ್ರೀರಾಮಚಂದ್ರನ ಪಟ್ಟಾಭಿಷೇಕವಾಗಿ ರಾಮ ರಾಜ್ಯದ ಸ್ಥಾಪನೆ ಆದದ್ದು ಒಂದು ಭಾಗವಾದರೆ,ಈ ಕಲಿಯುಗದಲ್ಲಿ ಅಯೋಧ್ಯೆಯಲ್ಲಿ ಇದ್ದ ಪ್ರಭು ಶ್ರೀರಾಮಚಂದ್ರನ ಮಂದಿರವನ್ನು ಬಾಬರನ ಸೈನ್ಯ ಕೆಡವಿ ಮಸೀದಿ ಮಾಡಿದ್ದಲ್ಲಿನಿಂದ, ಆ ಮಸೀದಿಯನ್ನ ಕೆಡವಿ ಅಲ್ಲಿ ಪುನಃ ಒಂದು ಭವ್ಯ ಮಂದಿರ ನಿರ್ಮಾಣ ಮಾಡಲು ಆಯಾ ಕಾಲದ ಆಡಳಿತ ವ್ಯವಸ್ಥೆ ವಿರುದ್ಧ ಸುಧೀರ್ಘ ಹೊರಾಟ ಮಾಡಿ ಇಂದು ನೆರವೇರುತ್ತಿರುವ ಶಿಲಾನ್ಯಾಸದವರೆಗಿನ ಅಧ್ಯಾಯ ಇನ್ನೊಂದು ಭಾಗ. ಅಲ್ಲಿ ರಾವಣನ ಸಂಹಾರ ಆಯಿತು, ಇಲ್ಲಿ ಕಾಂಗ್ರೆಸ್ ಪಕ್ಷ ಎಂಬ ಸೆಕ್ಯುಲರ್ ಮಾರೀಚನ ಅಧಃಪತನ ಆಯಿತು. ಈ ಘಟನೆಗಳ ಸರಪಳಿಯಲ್ಲಿ ನನ್ನ ಊರಾದ ಹೆರಂಜೆ ಮತ್ತು ಸುತ್ತಮುತ್ತಲಿನ ಇನ್ನೂ ಐವತ್ತನಾಲಕ್ಕು ಗ್ರಾಮಗಳ ಒಂದು ಅಳಿಲು ಸೇವೆಯ ಕೊಂಡಿ ಕೂಡ ಇತ್ತು.

ಇದು ನನ್ನ ಸೌಭಾಗ್ಯವೇ ಹೌದು, ನನ್ನ ಬಾಲ್ಯದ ತೀರಾ ಮೊದಲಿನ ನೆನಪುಗಳಲ್ಲಿ ನನ್ನ ಮನಸ್ಸಿನಲ್ಲಿ ಇನ್ನು ಅಚ್ಚೊತ್ತಿದಂತೆ ಉಳಿದಿರುವುದು “ರಾಮ ಶಿಲಾ ರಥ ಯಾತ್ರ.” ಇದು ನಡೆದದ್ದು 1990-91 ರ ಸಮುಯದಲ್ಲಿ. ಆಗ ನನಗೆ ಸುಮಾರು 8-9 ರ ವಯಸ್ಸು. ಅದು ‌ಸುಮಾರು ರಾತ್ರಿ‌ ಎಂಟು‌ ಗಂಟೆಯ ಸಮಯ.ದೂರದ ಬಯಲಿನ ಅಂಚಿನಲ್ಲಿ ‌ಒಂದು ಗುಂಪು‌ ಪೆಟ್ರೊ ಮ್ಯಾಕ್ಸ್ ಲೈಟ್, ತೆಂಗಿನ ಗರಿಯ ಬೆಂಕಿ‌ಸೂಡಿ ಹಿಡಿದು ಜೋರಾಗಿ ರಾಮ ಭಜನೆ ಮಾಡುತ್ತಾ ತಾಳ ತಟ್ಟುತ್ತ ನಮ್ಮ‌ ಮನೆಯತ್ತ ಬರವುದನ್ನ‌ ಕಂಡೊಡನೆ, ಓಡಿ ಹೋಗಿ ಅಜ್ಜಿಗೆ ಹೇಳಿದೆ. ಅಜ್ಜಿ ಕೂಡಲೇ ಹೊರ ಬಂದು ಅಂಗಳಕ್ಕೆಲ್ಲಾ ನೀರು ಹಾಕಿ ಶೇಡಿ‌ ಮಣ್ಣಿನಲ್ಲಿ‌‌ ರಂಗೋಲಿ ‌ಬಿಡಿಸಿ, ತುಳಸಿಗೆ ದೀಪ ಹಚ್ಚಿ, ಮನೆಯ ಒಳಗಿದ್ದ ಒಂದು ತಾಮ್ರದ ಬಿಂದಿಗೆ, ಒಂದು ಚೆಂಬು,ಒಂದು ಬಟ್ಟಲು ಗಟ್ಟಿ ಬೆಲ್ಲ ತಗೆದು ಬಾವಿಕಟ್ಟಯಲ್ಲಿ‌ ಇಟ್ಟು ಅವರು ಬರುವುದನ್ನೆ ಎದುರು‌ ನೋಡುತ್ತಿದ್ದರು.ನನಗೆ ಆಶ್ಚರ್ಯ ಇದೇನಿದು ಇವರು ಮಾರಿಗೆ, ಕಂಬಳಕ್ಕೆ ಊರೂರು ತಿರುಗಿ ಡೋಲು ಹೊಡೆಯುವವರಲ್ಲ, ಜೊತಗೆ ಭಜನೆ ಬೇರೆ ಕೇಳಿಸುತ್ತಿದೆ, ಅಜ್ಜಿ ನೋಡಿದರೆ ಇಷ್ಟೆಲ್ಲಾ ವ್ಯವಸ್ಥೆ ಮಾಡಿ ಕಾದು ಕುಳಿತಿದ್ದಾರೆ. ಅವರು ನಮ್ಮ ಅಂಗಳಕ್ಕೆ ಬರುವ ತನಕ. ನನಗೆ ಕಾಯದೆ ಬೇರೆ ಉಪಾಯ ಇರಲಿಲ್ಲ.

ಮತ್ತಷ್ಟು ಓದು »

30
ಜುಲೈ

‘ಗ್ರಸ್ತ’ ಕಾದಂಬರಿ – ನನ್ನ ಅನಿಸಿಕೆಗಳು.

– ಸುದರ್ಶನ ಗುರುರಾಜ ರಾವ್

ಕೊಂಡು ತಂದು ೨ ವರ್ಷಗಳಷ್ಟೇ ಆಗಿದ್ದರೂ ಗ್ರಸ್ತವನ್ನು ಓದಲು ಕಾಲ ಕೂಡಿ ಬಂದಿರಲೇ ಇಲ್ಲ. ಅಂತರ್ಜಾಲದಲ್ಲೂ ,ಫೇಸ್ಬುಕ್ ಪುಟಗಳಲ್ಲೂ ಸಾಕಷ್ಟು ಓದುಗರು ಈ ಕಾದಂಬರಿಯನ್ನು ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಮೊದಲು ಕರಣಂ ಅವರ ಕರ್ಮ ಮತ್ತು ನನ್ನಿ ಎರಡನ್ನೂ ಓದಿ ಮೆಚ್ಚಿದ್ದೆ.ಈ ಭಾನುವಾರ ಯಾವ ಕೆಲಸ ಇಲ್ಲದ ಕಾರಣ ನಿಧಾನವಾಗಿ ಕುಳಿತು ಓದಿದ್ದಾಯ್ತು. ಚಿಕ್ಕದಾದ ಕಾದಂಬರಿ ಚೆನ್ನಾಗಿ ಓದಿಸಿಕೊಂಡು ಹೋಯಿತು.

ಬೆಂಗಳೂರಿನ ಬ್ರಾಹ್ಮಣ ಬಡಾವಣೆಯಲ್ಲಿ ಪ್ರಾರಂಭವಾಗುವ ಕಥೆ ಅಲ್ಲಲ್ಲಿ ಹರಿದು, ಪ್ರಾಗ್ ಎಂಬ ವಿದೇಶಕ್ಕೆ ಹೋಗಿ ಪುನಃ ಬೆಂಗಳೂರಿಗೆ ಬಂದು, ತಿರುವು ಪಡೆದು ಮಲೆನಾಡಿನ ಮಲೆಯೊಂದರ ಮೇಲೆ ಬಂದು ನಿಲ್ಲುತ್ತದೆ ಮುಕ್ತಾಯವೋ ಹೊಸ ಆರಂಭವೋ ಎಂಬುದನ್ನು ಓದುಗರು ಊಹಿಸಿಕೊಳ್ಳಬೇಕು.

ಕೆಳ ಮಧ್ಯಮ ವರ್ಗದ ಮಾಧ್ವ ಬ್ರಾಹ್ಮಣ ಕುಟುಂಬದಲ್ಲಿ ಕಣ್ಣಿನ ತುಂಬಾ ಕನಸು ಹೊತ್ತ ಯುವತಿ, ಸರಿಯಾಗಿ ತಿಳಿಯದೆ, ಪರಿಶಿಷ್ಟ ಜಾತಿಯ ಯುವಕನನ್ನು ಪ್ರೀತಿಸಿ ಮನೆಬಿಟ್ಟು ಓಡಿಹೋಗಿ ಮದುವೆ ಮಾಡಿಕೊಳ್ಳುವ ಜಯಶ್ರೀ; ಕನಸುಗಳೊಂದೂ ಸಾಕಾರವಾಗದೆ ಬರೀ ಬೀಳುಗಳ ಹಾದಿಯಲ್ಲಿ ಕ್ರಮಿಸುತ್ತಲೇ ಇನ್ನೇನು ಸ್ವಲ್ಪ ಏಳು ಕಾಣುತ್ತಿದೆ ಎಂಬಲ್ಲಿ ಹೃದಯಾಘಾತದಿಂದ ನಿಧನಳಾಗುತ್ತಾಳೆ. ಕನಸುಗಳು ತುಂಬಿದ ಜೀವವೊಂದು, ಕನಸುಗಳೇ ಇಲ್ಲದ, ಕೆಲಸ ಮಾಡುವ ಕಸುವೂ ಇಲ್ಲದ ಒಬ್ಬನನ್ನು ಓಡಿಹೋಗಿ ಮದುವೆಯಾಗುವ ವಿಪರ್ಯಾಸಗಳು ದಿನವೂ ಕಂಡು ಕೇಳುವ ವಿಚಾರವೇ. ಬವಣೆಗಳನ್ನು ಕಣ್ಣಿಗೆ ಕಟ್ಟುವಂತೆ ವರ್ಣಿಸಿದ್ದಾರೆ. ಅವಳ ಮಗನೇ ಅಸಾಧಾರಣ ಬುದ್ಧಿಮತ್ತೆ ಮತ್ತು ಅತೀಂದ್ರಿಯ ಮನ:ಶಕ್ತಿ ಇರುವ ಅವಿನಾಶ್!

ಮತ್ತಷ್ಟು ಓದು »

4
ಜುಲೈ

ಕಾಂಗ್ರೆಸೀ – ಚೀನೀ ಭಾಯಿ ಭಾಯಿ, ದೇಶ ಬಡಿದುಕೊಳ್ಳಬೇಕಿದೆ ಬಾಯಿ ಬಾಯಿ!

– ಪ್ರೇಮಶೇಖರ

ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಮತ್ತು ಚೈನೀಸ್ ಕಮ್ಯೂನಿಸ್ಟ್ ಪಾರ್ಟಿಗಳ ನಡುವೆ ಹನ್ನೆರಡು ವರ್ಷಗಳ ಹಿಂದೆ ಅಂದರೆ 2008ರಲ್ಲಿ ರಹಸ್ಯ ಒಪ್ಪಂದವೊಂದಾಗಿದೆಯಂತೆ.  ವರದಿಗಳ ಪ್ರಕಾರ ಆ ಒಪ್ಪಂದಕ್ಕೆ ಸಹಿ ಹಾಕಿದ್ದು ಕಾಂಗ್ರೆಸ್ ಪರವಾಗಿ ಆಗಿನ ಜನರಲ್ ಸೆಕ್ರೆಟರಿ ಶ್ರೀ ರಾಹುಲ್ ಗಾಂಧಿ ಮತ್ತು ಸಿಸಿಪಿ ಪರವಾಗಿ ಆಗಿನ ಚೀನೀ ಉಪಾಧ್ಯಕ್ಷ ಷಿ ಜಿನ್‍ಪಿಂಗ್. ಈ ‘ರಹಸ್ಯೋತ್ಪಾಟನೆ’ ಇದುವರೆಗೆ ನಮ್ಮನ್ನು ಕಾಡುತ್ತಿದ್ದ ಹಲವಾರು ಪ್ರಶ್ನೆಗಳಿಗೆ ಉತ್ತರ ಒದಗಿಸುವಂತಿದೆ.  ಈ ಪ್ರಶ್ನೆಗಳು ಮತ್ತು ಉತ್ತರಗಳು ಏನು ಎನ್ನುವ ಮೊದಲು ಇದನ್ನೊಮ್ಮೆ ಓದಿ-

“ಚೀನೀಯರ ಜತೆಗಿನ ನಿಮ್ಮ ಆತ್ಮೀಯ ಸ್ನೇಹಸಂಬಂಧಗಳನ್ನು ಉಪಯೋಗಿಸಿಕೊಂಡು, (ಮಸೂದ್ ಅಜ಼ರ್ ವಿಷಯದಲ್ಲಿ) ಭಾರತಕ್ಕೆ ಹಿತಕಾರಿಯಾಗಿ ನಡೆದುಕೊಳ್ಳುವಂತೆ ಚೀನಾವನ್ನು ನೀವು ಮನವೋಲಿಸಬಹುದಾಗಿತ್ತಲ್ಲ?  ಹಾಗೇಕೆ ಮಾಡಲಿಲ್ಲ?  ಬದಲಾಗಿ, ಇಂದು ಚೀನಾ ನಮ್ಮ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ಬಗ್ಗೆ ನಿವು ಖುಷಿ ಪಡುತ್ತಿದ್ದೀರಲ್ಲ?  ಚೀನೀ ನಡವಳಿಕೆಯನ್ನು ನಿಮ್ಮ ಮೋದಿ-ವಿರುದ್ಧದ ರಾಜಕೀಯ ಹಿತಾಸಕ್ತಿಗಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದೀರಲ್ಲ?” ಎಂದು ರವಿಶಂಕರ್ ಪ್ರಸಾದ್ ಮತ್ತು ಅರುಣ್ ಜೇಟ್ಲಿ ಕೇಳುವ ಪ್ರಶ್ನೆಗಳನ್ನು ಹಿನ್ನೆಲೆಯಾಗಿಟ್ಟುಕೊಂಡು ಚೀನಾ ಕುರಿತಾಗಿ ರಾಹುಲ್ ಗಾಂಧಿವರ ನೀತಿಗಳನ್ನು ಅವಲೋಕಿಸೋಣ.

ಜೂನ್-ಆಗಸ್ಟ್ 2017ರ ದೊಕ್ಲಾಮ್ ಬಿಕ್ಕಟ್ಟಿನ ಸಂದರ್ಭದಲ್ಲಿ ರಾಹುಲ್ ಗಾಂಧಿ ನವದೆಹಲಿಯಲ್ಲಿನ ಚೀನೀ ದೂತಾವಾಸಕ್ಕೆ ಭೇಟಿ ನೀಡಿ, ಚೀನೀ ರಾಯಭಾರಿಯ ಜತೆ ಮಾತುಕತೆ ನಡೆಸಿದ್ದರು.  “ಈ ದೇಶದ ಒಬ್ಬ ನಾಯಕನಾಗಿ ದೊಕ್ಲಾಮ್ ಬಗ್ಗೆ ವಿವರಗಳನ್ನು ಪಡೆದುಕೊಳ್ಳಲು ನನಗೆ ಹಕ್ಕಿದೆ” ಎಂದವರು ತಮ್ಮ ಕೃತ್ಯವನ್ನು ಸಮರ್ಥಿಸಿಕೊಂಡಿದ್ದರು.  ಆದರೆ ಆ ಭೇಟಿಯಲ್ಲಿ ದೊಕ್ಲಾಮ್ ಬಗ್ಗೆ  ಯಾವುದೇ ಮಾತುಕತೆ ನಡೆಯಲಿಲ್ಲ ಎನ್ನುವ ಸೂಚನೆ ವರ್ಷದ ನಂತರ ರಾಹುಲ್ ಗಾಂಧಿಯವರಿಂದಲೇ ಬಂತು!  ಸೆಪ್ಟೆಂಬರ್ 2018ರಲ್ಲಿ ಲಂಡನ್‌ನಲ್ಲಿ ಪತ್ರಕರ್ತರ ಸಮಾವೇಶದಲ್ಲಿ “…ನೀವು ಅಧಿಕಾರದಲ್ಲಿದ್ದರೆ ದೊಕ್ಲಾಮ್ ವಿವಾದವನ್ನು ಹೇಗೆ ನಿಭಾಯಿಸುತ್ತಿದ್ದಿರಿ?” ಎಂಬ ಪ್ರಶ್ನೆ ಬಂದಾಗ ರಾಹುಲ್ ಗಾಂಧಿ “ದೊಕ್ಲಾಮ್ ಬಗ್ಗೆ ನನ್ನಲ್ಲಿ ವಿವರಗಳಿಲ್ಲ.  ಹೀಗಾಗಿ ಈ ಪ್ರಶ್ನೆಗೆ ಉತ್ತರಿಸಲು ನನ್ನಿಂದಾಗದು” ಎಂದುತ್ತರಿಸಿದರು.  ಇದರರ್ಥ ವರ್ಷದ ಹಿಂದೆ ಅವರು ದೊಕ್ಲಾಮ್ ಬಗ್ಗೆ ಮಾತಾಡುವ ನೆಪದಲ್ಲಿ ಚೀನೀ ರಾಯಭಾರಿಯನ್ನು ಭೇಟಿಯಾದಾಗ ಅವರು ಮಾತಾಡಿರುವುದು ಬೇರೆಯೇ ವಿಷಯ!  ಇದು ಸೂಚಿಸುವುದು ಚೀನೀಯರ ಜತೆ ರಾಹುಲ್ ಗಾಂಧಿ ಹೊಂದಿರಬಹುದಾದ, ಭಾರತ-ಚೀನಾ ಸಂಬಂಧಗಳಿಂದ ಬೇರೆಯಾದ, ಹೊಕ್ಕುಬಳಕೆಯ ಬಗ್ಗೆ.  ಇದರ ಸೂಚನೆ ಮತ್ತೊಂದು ಪ್ರಕರಣದಲ್ಲೂ ದೊರೆಯುತ್ತದೆ.  ಕಳೆದ ಸೆಪ್ಟೆಂಬರ್‌ನಲ್ಲಿ ರಾಹುಲ್ ಗಾಂಧಿ ಕೈಲಾಶ್ ಮಾನ್‌ಸರೋವರ್ ಯಾತ್ರೆಯ ಮೊದಲ ಹಂತವಾಗಿ ಕಾಠ್ಮಂಡುಗೆ ಹೊರಟಾಗ ಅವರನ್ನು ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಬೀಳ್ಕೊಡಲು ನವದೆಹಲಿಯಲ್ಲಿನ ಚೀನೀ ರಾಯಭಾರಿ ಬಯಸಿದ್ದರು. ಭಾರತ ಸರ್ಕಾರದ ಅನುಮತಿ ಸಿಗದೇಹೋದದ್ದರಿಂದ ಅದು ಸಾಧ್ಯವಾಗಲಿಲ್ಲ.

ಮತ್ತಷ್ಟು ಓದು »

3
ಜುಲೈ

ರಾಮಾಯಣ,ಮಹಾಭಾರತ,ಪುರಾಣಗಳ 64 ಸಂಪುಟಗಳು ಕನ್ನಡದಲ್ಲಿ ಅತ್ಯಂತ ಕಡಿಮೆ ಬೆಲೆಗೆ

– ವಿಶ್ವನಾಥ ಸುಂಕಸಾಲ

ಮೂಲ ಶ್ಲೋಕಗಳೊಂದಿಗೆ ಕನ್ನಡದಲ್ಲಿ ರಾಮಾಯಣ, ಮಹಾಭಾರತದ ಗ್ರಂಥಗಳು ಸಿಗುತ್ತವೆಯೇ ಎಂಬ ಪ್ರಶ್ನೆ ಹಲವರದು. ಕನ್ನಡದಲ್ಲಿ ಸಮಗ್ರವಾಗಿ ಇಂಥ ಗ್ರಂಥಗಳು ದೊರೆಯುವುದು ವಿರಳವೇ. ಒಂದೆರಡು ಪ್ರಕಾಶನಗಳು ಮಾತ್ರ ಇಂದಿಗೂ ರಾಮಾಯಣ, ಮಹಾಭಾರತ, ಪುರಾಣಗಳನ್ನು ಜನರಿಗೆ ದೊರಕುವಂತೆ ಮಾಡುತ್ತಿವೆ. ಅವುಗಳಲ್ಲಿ ಭಾರತ ದರ್ಶನ ಪ್ರಕಾಶನವೂ ಒಂದು.

ಅತ್ಯಂತ ಕಡಿಮೆ ಬೆಲೆಗೆ ಕನ್ನಡದ ಜನತೆಗೆ ಭಾರತೀಯ ಸಂಸ್ಕೃತಿಯ ಮೂಲವಾದ ಈ ಗ್ರಂಥಗಳನ್ನು ತಲುಪಿಸಲೆಂದೇ ಹುಟ್ಟಿದ ಸಂಸ್ಥೆ ‘ಭಾರತ ದರ್ಶನ ಪ್ರಕಾಶನ’.

ಮುದ್ರಣದ ವ್ಯಯಕ್ಕಿಂತ ಕಡಿಮೆ ಬೆಲೆಗೆ ಪುಸ್ತಕವನ್ನು ಒದಗಿಸುತ್ತಿರುವ ಭಾರತ ದರ್ಶನ ಪ್ರಕಾಶನಕ್ಕೆ ಓದುಗರು, ದಾನಿಗಳೇ ಬೆನ್ನೆಲುಬು. ರಾಮಾಯಣ, ಮಹಾಭಾರತಗಳ ಕಥೆಗಳನ್ನು ಸಂಕ್ಷಿಪ್ತವಾಗಿ ವಿವರಿಸುವ ಅನೇಕ ಪುಸ್ತಕಗಳು ಸಿಗಬಹುದು. ಆದರೆ ಮೂಲ ವಾಲ್ಮೀಕಿ ಹಾಗೂ ವ್ಯಾಸರಿಂದ ಲಿಖಿತವಾದ ಪ್ರತಿ ಶ್ಲೋಕವನ್ನೂ ಸಂಪುಟದ ಒಂದು ಕಡೆ ಕೊಟ್ಟು, ಮತ್ತೊಂದು ಭಾಗದಲ್ಲಿ ಸಂಪೂರ್ಣ ಅರ್ಥವನ್ನು ವಿಸ್ತೃತವಾಗಿಯೂ, ನಿರ್ದುಷ್ಟವಾಗಿಯೂ, ಸರಳ ಕನ್ನಡದಲ್ಲಿ ವಿವರಿಸಿರುವ ಗ್ರಂಥಮಾಲೆ ತೀರಾ ವಿರಳ.

ಭಾರತ ದರ್ಶನ ಪ್ರಕಾಶನದ ಒಂದೊಂದು ಸಂಪುಟವೂ 620-650 ಪೇಜುಗಳಿಂದ ಕೂಡಿವೆ. ಪ್ರತಿ ಸಂಪುಟದ ಮುದ್ರಣಕ್ಕೂ ಸರಾಸರಿ 120-150 ರೂಪಾಯಿಗಿಂತ ಹೆಚ್ಚು ವ್ಯಯವಾಗುತ್ತದಂತೆ. ಆದರೆ, ರಾಮಾಯಣ, ಮಹಾಭಾರತಗಳ ಪ್ರಚಾರಕ್ಕಾಗಿಯೇ ಹುಟ್ಟಿಕೊಂಡ ಈ ಸಂಸ್ಥೆಯು ದಾನಿಗಳ ಸಹಕಾರದಿಂದ ಮುದ್ರಣ ವ್ಯಯಕ್ಕಿಂತಲೂ ಕಡಿಮೆ ದರಕ್ಕೆ ಅಂದರೆ ಸರಾಸರಿ ಬರೀ ನೂರು ರೂಪಾಯಿಗೆ ಕೊಡುತ್ತಿದೆ.

ಮತ್ತಷ್ಟು ಓದು »

3
ಜುಲೈ

ಕಮ್ಯುನಿಸಂನ ಅಭದ್ರತೆ ಮತ್ತು ಅಸಹನೆಯೇ ಚೀನಾ ಆಕ್ರಮಣದ ಮೂಲ

– ಅಜಿತ್ ಶೆಟ್ಟಿ ಹೆರಂಜೆ

ಯಾವುದೇ ದೇಶ ಅಂತರರಾಷ್ಟ್ರೀಯ ವ್ಯಾಪಾರದಲ್ಲಿ ಪ್ರಭುತ್ವ ಸ್ಥಾಪಿಸಬೇಕಾದರೆ ಅದು ವ್ಯಾಪಾರ ನಡೆಸುವ ಮಾರ್ಗ ಸುರಕ್ಷಿತವಾಗಿರಬೇಕು ಮತ್ತು ಬಹುತೇಕ ಅದು ಆ ದೇಶದ ನಿಯಂತ್ರಣದಲ್ಲಿ ಇರಬೇಕು. ಈ ಭೂಮಿಯ ಮೇಲೆ ಶತಮಾನಗಳಿಂದಲೂ ಅಂತಾರಾಷ್ಟ್ರೀಯ ವ್ಯಾಪಾರ ಬಹುತೇಕ ಸಮುದ್ರ ಮಾರ್ಗದ ಮುಖಾಂತರವೇ ನೆಡೆದಿದ್ದು. ಇದರ ನಿಯಂತ್ರಣ ಯಾರ ಕೈಯಲ್ಲಿ ಇರುತ್ತದೆಯೋ ಅವರು ಜಗತ್ತಿನ ರಾಜಕೀಯವನ್ನು ನಿಯಂತ್ರಿಸುತ್ತಾರೆ. ಇದಕ್ಕೆ ಇತಿಹಾಸದಲ್ಲಿ ಅನೇಕ ಉದಾಹರಣೆಗಳು ಸಿಗುತ್ತವೆ. ನೆಪೋಲಿಯನ್ ಬೊನಪಾರ್ಟೆ ಇಂಗ್ಲೆಂಡನ್ನು ಸಾಮರಿಕವಾಗಿ ಬಗ್ಗುಬಡಿಯಲು ಆಗದ ಸಂದರ್ಭದಲ್ಲಿ ಅದರ ಆರ್ಥಿಕತೆಯ ನರಮಂಡಲವಾಗಿದ್ದ ಸಮುದ್ರ ವ್ಯಾಪಾರ ಮಾರ್ಗದ ಮೇಲೆ ದಿಗ್ಭಂಧನವನ್ನು ಹಾಕುತ್ತಾನೆ. ಇದು ಆ ಕಾಲದಲ್ಲಿ ಇಂಗ್ಲೆಂಡಿಗೆ ಬಲವಾದ ಹೊಡತವನ್ನೇ ಕೊಟ್ಟಿತ್ತು. ಯೂರೋಪ್ ಮತ್ತು ಪೂರ್ವ ರಾಷ್ಟ್ರಗಳ ನಡುವೆ ವಾಣಿಜ್ಯ ವ್ಯವಹಾರಗಳ ಸಂಪರ್ಕದ ಕೊಂಡಿಯಾಗಿದ್ದ ಕಾಂನ್‌ಸ್ಟಾಂಟಿನೋಪಲನ್ನು ಒಟ್ಟೋಮನ್ ತುರ್ಕರು ವಶಪಡಿಸಿಕೊಂಡಾಗ ಯುರೋಪಿಯನ್ನರಿಗೆ ಪೂರ್ವದ ಜೊತೆಗೆ ವ್ಯವಹಾರ ಮಾಡಲು ಹೊಸ ಮಾರ್ಗದ ಅನ್ವೇಷಣೆ ಮಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಯಿತು. ಹಾಗೆಯೆ ಇವತ್ತು ಚೀನಾ ಇಂತಹುದೇ ಒಂದು ಕೃತ್ಯಕ್ಕೆ ಕೈ ಹಾಕಿ ಕೈ ಸುಟ್ಟುಕೊಳ್ಳುತ್ತಿದೆ.

ಕಳೆದ ಕೆಲವು ದಿನಗಳಿಂದ ಲಡಾಕಿನ ಗಲ್ವಾನ್ ಸರೋವರದ ತೀರದಲ್ಲಿ ಭಾರತ ಮತ್ತು ಚೀನಾ ನಡುವೆ ನಡೆಯುತ್ತಿರುವ ಉಪದ್ರವ ಚೀನಾ ಇಡೀ ಜಗತ್ತಿನಲ್ಲಿ ತಾನು ವಿಶ್ವದ ಆರ್ಥಿಕ ಜಗತ್ತಿನ ಅನಭಿಶಕ್ತ ದೊರೆಯಾಗಬೇಕು ಎನ್ನುವ ಕೂಟ ನೀತಿಯ ಒಂದು ಚಿಕ್ಕ ಭಾಗ. ಇದು ಭಾರತ ಮತ್ತು ಚೀನಾದ ಒಂದು ಸಣ್ಣ ಗಡಿ ವಿವಾದ ಎಂದು ಭಾವಿಸಿದರೆ ಖಂಡಿತ ತಪ್ಪಾಗುತ್ತದೆ.

ಮತ್ತಷ್ಟು ಓದು »

26
ಜೂನ್

ಅಧಿಕಾರ ನಿಮಿತ್ತಂ ಬಹುಕೃತ ವೇಷಂ

– ಬಿದಿರೆ ಪ್ರಕಾಶ್

ಎಂತಹ ಮಾತು? :  ‘ನನ್ನ ಮೇಲೆ ಬಿಜೆಪಿಯ ಕೃಪೆಯಿದೆ, ಬಿಜೆಪಿಯ ಕೃಪೆಯಿಂದ, ಬಿಜೆಪಿಯ ಹಿರಿಯರು ನೀಡಿದ ನನಗೊಂದು ಅವಕಾಶದಿಂದ ನಾನು ಇಂತಹ ಸ್ಥಾನದಲ್ಲಿದ್ದೇನೆ’ ಇದು ಇಡೀ ದೇಶದಲ್ಲಿ ತನ್ನದೇ ನಾಮಬಲದಿಂದ ಬಿಜೆಪಿಯನ್ನು ಮೇರು ಶಿಖರಕ್ಕೆ ಹೊತ್ತೊಯ್ದ ದೇಶದ ನೆಚ್ಚಿನ ಪ್ರಧಾನಿಯವರ ಮಾತುಗಳು.

ಕಳೆದ ಲೋಕಸಭಾ ಚುನಾವಣೆಯಲ್ಲಿ 282ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದದ್ದೂ ಇವರ ನಾಮಬಲದಿಂದಲೇ, ನಂತರ ಒಂದಾದ ಮೇಲೆ ಒಂದರಂತೆ ದೇಶದ ರಾಜ್ಯಗಳೆಲ್ಲಾ ಬಿಜೆಪಿ ಗೆಲುವು ಸಾಧಿಸುತ್ತಿರುವುದೂ ಇವರ ಸಾಮರ್ಥ್ಯದಿಂದಲೇ. ಆದರೆ ಈ ಗೆಲುವು, ಸಾಧನೆಗಳೆಲ್ಲವಕ್ಕೂ ತಾವೇ ಕಾರಣೀ ಪುರುಷನಾಗಿದ್ದರೂ ಅದನ್ನು ‘ಕಾರ್ಯಕರ್ತರ ಗೆಲುವು’, ಹಿರಿಯರು ಕೊಟ್ಟ ಅವಕಾಶ’ ಎಂದು ಹೇಳುವ ಶ್ರೀ ನರೇಂದ್ರ ಮೋದಿಯವರಂತಹ ಮೇರು ವ್ಯಕ್ತಿತ್ವವಿರುವುದೂ ಬಿಜೆಪಿಯಲ್ಲೇ.

ಎಂತಹ ವಿಪರ್ಯಾಸ… ! :  ಬಿಜೆಪಿ ಅಧಿಕಾರದಲ್ಲಿದ್ದಾಗ ಮಾತ್ರ ಬಿಜೆಪಿಗೆ ಬಂದರು, ಅಧಿಕಾರವನ್ನೂ ಅನುಭವಿಸಿದರು. ಬಿಜೆಪಿಗೆ ಏನನ್ನೂ ಕೊಡದೆ, ಬಿಜೆಪಿಯಿಂದಲೇ ಎಲ್ಲವನ್ನೂ ಪಡೆದರು. ಕೊನೆಗೆ ಬಿಜೆಪಿಯನ್ನೂ, ಬಿಜೆಪಿ ನಾಯಕರನ್ನೂ ಜರಿದು ಬಿಡುವ ಬಿ.ಜೆ. ಪುಟ್ಟಸ್ವಾಮಿಯಂತಹ ನಾಯಕ(?)ರುಗಳು ಇರುವುದೂ ಬಿಜೆಪಿಯಲ್ಲೇ.ಬಿಜೆಪಿಗೆ ಒಳಹೊಕ್ಕಾಗ ಇದರಿಂದ ಬರುವಂತಹ ಮಾತುಗಳೆಂತಹವು? ಬಿಜೆಪಿ ಬಿಡುವಾಗ ಇವರುಗಳ ಬಾಯಿಂದ ಉದುರುವ ನುಡಿಮುತ್ತುಗಳೆಂತವು? ಎಂಎಲ್‌ಸಿ ಸ್ಥಾನ ವಂಚಿತರಾದ ಕೂಡಲೇ ಎಂತಹ ಮಾತುಗಳು ಈ ಪುಟ್ಟಸ್ವಾಮಿಯವರಿಂದ ಬಂದು ಬಿಟ್ಟಿತು! ಇವರು ಬಂದ ಮೇಲೆಯೇ ಬಿಜೆಪಿಯಲ್ಲಿ ಹಿಂದುಳಿದ ವರ್ಗ ಸಂಘಟನೆಯಾಯಿತಂತೆ! ಪುಟ್ಟಸ್ವಾಮಿಯವನರನ್ನು ಒಮ್ಮೆ ಕೇಳಲೇಬೇಕು. ಎಲ್ಲಿದ್ದೀರಾ ಪುಟ್ಟಸ್ವಾಮಿಯವರೇ? ನೀವು ಬರುವ ಮೊದಲು ಬಿಜೆಪಿ ಏನಾಗಿತ್ತು? ನೀವು ಬಂದ ಮೇಲೆ ಬಿಜೆಪಿ ಏನಾಯಿತು? ಎಂಬುದನ್ನು ಒಮ್ಮೆ ನೆನಪಿಸಿಕೊಳ್ಳಿ, ಹಾಗೆಯೇ ಬಿಜೆಪಿಗೆ ನೀವು ಬಂದ ಮೇಲೆ, ನೀವೂ, ನಿಮ್ಮ ಅಂತಸ್ತು ಏನಾಯಿತೆಂಬುದನ್ನೂ ಮನನ ಮಾಡಿಕೊಳ್ಳಿ.

ಮತ್ತಷ್ಟು ಓದು »

19
ಜೂನ್

ಗಲ್ವಾನ್ ಗಲಾಟೆ – ಭಾರತ ಚೀನಾ ತಗಾದೆಯ ಒಳಸುಳಿಗಳು

– ರಾಘವೇಂದ್ರ ಸುಬ್ರಹ್ಮಣ್ಯ

1962 ಭಾರತಕ್ಕೆ ಕಹಿನೆನಪುಗಳನ್ನು ಕೊಟ್ಟ ವರ್ಷ. 1950ರ ಟಿಬೇಟ್ ಆಕ್ರಮಣದ ಕೆಲವೇ ದಿನಗಳನಂತರದ ಪತ್ರದಲ್ಲೇ ಸರ್ದಾರ್ ಪಟೇಲರು ನೆಹರೂಗೆ ನಮ್ಮ ನಿಜವಾದ ಶತ್ರು ಯಾರು ಅಂತಾ ತಿಳಿಸಿಕೊಟ್ಟಿದ್ದರೂ (7 November 1950ರ ಪತ್ರ, ಲಿಂಕ್ ಕಮೆಂಟಿನಲ್ಲಿದೆ), ನೆಹರೂ ನಿರ್ಲಕ್ಷ್ಯದಿಂದಾಗಿ ಚೀನಾ ಬೆಳೆಯುತ್ತಲೇ ಹೋಯಿತು, ತನ್ನ ಬೇಳೆ ಬೆಳೆಸಿಕೊಳ್ಳುತ್ತಲೇ ಹೋಯಿತು. 62ರ ಯುದ್ಧವೂ ನಡೆಯಿತು. ನಮ್ಮ ದುರಾದೃಷ್ಟವೋ, ಅಥವಾ ಚೀನಾದ ಅಪಾರ ಆಳದ ಇಂಟೆಲಿಜೆನ್ಸೋ, ಅಥವಾ ಕಾಕತಾಳಿಯವೋ ಎಂಬಂತೆ ಅಮೇರಿಕಾ ಮತ್ತು ರಷ್ಯಾ ಕ್ಯೂಬನ್ ಕ್ಷಿಪಣಿ ಬಿಕ್ಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡಿದ್ದವು. ಇಲ್ಲವಾದಲ್ಲಿ ಬೇರೇನಲ್ಲದಿದ್ದರೂ ನಾನೇ ದೊಡ್ಡಣ್ಣ ಅಂತಾ ತಿಳಿಸಿಕೊಡಲಿಕ್ಕೆ ಅಮೇರಿಕವೂ, ನೆಹರೂವಿನ ಖಾಸಾ ದೋಸ್ತು ಅಂತೆನಿಸಿಕೊಂಡಿದ್ದ ನಿಖಿತಾ ಕ್ರುಶ್ಚೇವನ ರಷ್ಯಾವೂ ಖಂಡಿತಾ ಭಾರತದ ಪರವಾಗಿ ನಿಲ್ಲುತ್ತಿದ್ದವು. ಡ್ರಾಗನ್ ತನ್ನ ಬಾಲ ಮುದುರಲೇಬೇಕಿತ್ತು. (ಚೀನಾ ತನ್ನ ಆಕ್ರಮಣವನ್ನು ಕ್ಯೂಬನ್ ಮಿಸೈಲ್ ಕ್ರೈಸಿಸ್ ಸಮಯಕ್ಕೆ ಸರಿಯಾಗಿ ಪ್ರಾರಂಭಿಸಿದ್ದು ಕಾಕತಾಳಿಯವಲ್ಲ, ಅದಕ್ಕೆ ಕ್ಯೂಬಾದ ಕಥೆಯ ಬಗ್ಗೆ ಮೊದಲೇ ಗೊತ್ತಿತ್ತು ಎಂಬುದೊಂದು ಕಾನ್ಸ್ಪಿರಸಿ ಥಿಯರಿ).

ಹೋಗಲಿ ಬಿಡಿ. ಆದದ್ದಾಯಿತು. ಭಾರತಕ್ಕೆ 62ರ ರಕ್ತದ ಕಲೆಯಂತೂ ಮಾಸಲಿಲ್ಲ. ಆದರೆ ನನಗೆ ಬೇಸರ ಅದಲ್ಲ. ನಮ್ಮ ನೆನಪೂ ಸಹ 62ಕ್ಕೇ ಮೀಸಲಾಗಿ ನಿಲ್ಲುತ್ತದೆಯೇ ಹೊರತು ಅದಾದ ಮೇಲೆ ನಾವು ಅಂದರೆ ಭಾರತದವರು ಕಡಿದುಕಟ್ಟೆಹಾಕಿದ್ದು ಏನೂ ಇಲ್ಲ. ನೆಹರೂನನ್ನೇ ಬೈಕಂಡು ಕೂತಿದ್ದೇವೆಯೇ ಹೊರತು ರಾಜತಾಂತ್ರಿಕವಾಗಿ, ಆರ್ಥಿಕವಾಗಿ, ವೈಜ್ಞಾನಿಕವಾಗಿ ಚೀನಾಕ್ಕೆ ಎದುರೇಟು ಕೊಟ್ಟಿದ್ದೇನೂ ಇಲ್ಲ. 1950ರ ಚೀನಾದ ಟಿಬೇಟ್ ಆಕ್ರಮಣವನ್ನು ಟೀಕಿಸಿದ ನೆಹರೂವನ್ನು ಶಿಕ್ಷಿಸಲು ಚೀನಾ 1962ರ ಆಕ್ರಮಣ ಅವಕಾಶವನ್ನು ಸಮರ್ಥವಾಗಿ ಉಪಯೋಗಿಸಿಕೊಂಡಿತು. 1966ರಲ್ಲಿ ಚೀನಾ ಭೂತಾನ್ ಅನ್ನು ಆಕ್ರಮಿಸಲು ಪ್ರಯತ್ನಿಸಿದಾಗ ಚೀನಾದ ಪ್ರಯತ್ನವನ್ನು ಟೀಕಿಸಿದ ಮತ್ತು ಭೂತಾನ್ ಪರವಾಗಿ ಹೋರಾಡಲು ತನ್ನ ಸೈನ್ಯ ಕಳಿಸಿದ್ದ ಇಂದಿರಾಳನ್ನು ಶಿಕ್ಷಿಸಲು ಚೀನಾ ಪ್ರಯತ್ನ ಮಾಡುತ್ತಲೇ ಹೋಯಿತು. ಇಂದಿಗೂ ಮಾಡುತ್ತಲೇ ಇದೆ. ಡೋಕ್ಲಾಮ್ ಚಕಮಕಿ ಬಗ್ಗೆ ಸ್ವಲ್ಪವಾದರೂ ರೀಸರ್ಚ್ ಮಾಡಿದವರಿಗೆ ಇದರಬಗ್ಗೆ ಗೊತ್ತಿರುತ್ತೆ. ಹೌದು, ಡೋಕ್ಲಾಮ್ ಗಲಾಟೆ ಇವತ್ತಿನದ್ದಲ್ಲ, 1966ರಿಂದ ನಡೆದುಕೊಂಡೂ ಬಂದಿರುವುದು. ಅದಾದ ಮೇಲೆ ಬಂದ ಎಲ್ಲಾ ಪ್ರಧಾನಿಗಳೂ ಚೀನಾಕ್ಕೆ ಸ್ವಲ್ಪ ಹೆದರಿಕೊಂಡೇ ಇದ್ದವರು, ಚಂದ್ರಶೇಖರ್ ಒಬ್ಬರನ್ನು ಬಿಟ್ಟರೆ. ಎನ್.ಡಿ.ಎ ಕೂಡಾ ಜಾರ್ಜ್ ಫರ್ನಾಂಡಿಸ್’ರಂತಹ ಎದೆಗಾರಿಕೆಯ ವ್ಯಕ್ತಿಯಿದ್ದರೂ ಸಹ (ಅದೂ ಸಹ ಕಟ್ಟಾ ಚೀನಾ ವಿರೋಧಿಯಾಗಿದ್ದ ವ್ಯಕ್ತಿ) ಯಾಕೋ ಚೀನಾ ವಿರುದ್ಧ ಮಂಕಾಯಿತು. ಸಿಂಗರ ಕಾಲವಂತೂ ಕೇಳುವುದೇ ಬೇಡ. ಆದರೆ 2013ರ ನಂತರವೂ ನಾವು ನೆಹರೂ-ಅಕ್ಸಾಯ್ ಚಿನ್-ಹಿಮಾಲಯನ್ ಬ್ಲಂಡರ್ ಅನ್ನುವ ಘೋಷಣೆಗಳನ್ನು ಬಿಟ್ಟರೆ ಚೀನಾಕ್ಕೆ ಅದರ ಭಾಷೆಯಲ್ಲೇ ಉತ್ತರಿಸಲು ಪ್ರಯತ್ನಿಸಿಲ್ಲ. ಬದಲಿಗೆ ನಮ್ಮ ದೇಶದಲ್ಲಿ ಹೆಚ್ಚೆಚ್ಚು ಚೀನಾ ಬೇರೂರಿತು. ಚೀನೀ ಕಂಪನಿಗಳ ಮೇಲೆ ಭಾರತ ಯಾವುದೇ ನಿಷೇಧ ಹೇರಿಲ್ಲ. ನಮ್ಮ ಸರ್ಕಾರ ಮತ್ತು ಖಾಸಗೀ ಕಂಪನಿಗಳು ಚೀನಿಯರಿಗೆ ಹೆಚ್ಚೆಚ್ಚು ಕಾಂಟ್ರಾಕ್ಟುಗಳನ್ನು ಕೊಟ್ಟಿವೆ. ಮೋದಿ ಮತ್ತೆ ಮತ್ತೆ ‘ವಿನ್ನಿ ದ ಪೂ’ವನ್ನು ಭೇಟಿಯಾದರು. ಅವರಿಲ್ಲಿಗೆ ಬಂದರು, ಇವರಲ್ಲಿಗೆ ಹೋದರು. ಭಾರತ ಇನ್ನೂ ಹೆಚ್ಚೆ ಚೀನಾದ ವಸ್ತುಗಳ ಮೇಲೆ ಅವಲಂಬಿತವಾಗುತ್ತಲೇ ಹೋಯ್ತು.

ಮತ್ತಷ್ಟು ಓದು »

19
ಜೂನ್

ಅಂದು ಇತಿಹಾಸ ಬದಲಿಸಬಲ್ಲ ತಿಮ್ಮಯ್ಯನಿದ್ದರು, ಆದರೆ ಮೋದಿಯಂಥಾ ಪ್ರಧಾನಿಯಿರಲಿಲ್ಲ!

– ಸಂತೋಷ್ ತಮ್ಮಯ್ಯ

೧೫೮೦ರಿಂದಲೂ ಲಡಾಕ್ ಭಾರತೀಯ ಬುಡಕಟ್ಟು “ಸ್ಕಾರ್ಡೋ” ಜನಾಂಗದ ಅಧೀನದಲ್ಲಿದ್ದ ಪ್ರದೇಶ. ಟಿಬೇಟಿನೊಂದಿಗೆ ನಡೆಯುತ್ತಿದ್ದ ನಿರಂತರ ಯುದ್ಧಗಳಿಗೆ ಕೊನೆ ಹಾಡಬೇಕೆಂಬ ಉದ್ದೇಶದಿಂದ ೧೬೮೪ರಲ್ಲಿ ಲಡಾಕ್ ಮತ್ತು ಟಿಬೇಟ್ ಟಿಂಗ್ ಮೋಸ್ಗಂಗ್‌ನಲ್ಲಿ ಒಪ್ಪಂದವೊಂದನ್ನು ಮಾಡಿಕೊಂಡಿತು. ಒಪ್ಪಂದದ ಪ್ರಕಾರ ಪಾಂಗಾಂಗ್ ತ್ಸು ಸೇರಿದಂತೆ ಸುತ್ತಮುತ್ತಲ ಪ್ರದೇಶಗಳೆಲ್ಲವೂ ಲಡಾಕಿನದ್ದು ಎಂದು ತೀರ್ಮಾನವಾಗಿತ್ತು. ಮುಂದೆ ಲಡಾಕ್ ಸಿಕ್ಖರ ಆಳ್ವಿಕೆಗೆ ಒಳಪಟ್ಟಾಗ ಮಹಾರಾಜ ಗುಲಾಬ್ ಸಿಂಗ್ ತನ್ನ ಸರದಾರ ಜೊರಾವರ ಸಿಂಹನನ್ನು ದಂಡಯಾತ್ರೆಗೆ ಕಳುಹಿಸಿದಾಗ ನಡೆದ ಒಂದು ಘಟನೆ ಅತ್ಯಂತ  ಕುತೂಹಲಕಾರಿಯಾಗಿದೆ.

ದಂಡಯಾತ್ರೆಗೆ ಹೊರಟ ಜೊರಾವರ ಸಿಂಹ ಸುಂದರ ಸರೋವರದ ದಂಡೆಯಲ್ಲಿ ಬೀಡುಬಿಟ್ಟಿದ್ದ. ಆದರೆ ಕುದುರೆಗಳು ಆ ನೀರನ್ನು ಕುಡಿಯದಿದ್ದಾಗ ಪ್ರತಿಜ್ಞೆಯೊಂದನ್ನು ಕೈಗೊಂಡು ಇದಕ್ಕಿಂತಲೂ ಸುಂದರವೂ, ವಿಶಾಲವೂ ಆದ ಸರೋವರದಲ್ಲಿ ನೀರು ಕುಡಿಸುತ್ತೇನೆ ಎಂದು ಆತ ಸಂಕಲ್ಪ ಮಾಡಿದನಂತೆ! ಅದರಂತೆ ಜೊರಾವರ ಸಿಂಹ ಮುಂದುವರಿದು ಕೈಲಾಸ ಮಾನಸ ಸರೋವರದಲ್ಲಿ ಮನಸೋ ಇಚ್ಛೆ ಮಿಂದನಂತೆ. ಇವು ಸಿಕ್ಖ್ ಲಾವಣಿಗಳಲ್ಲಿ ಮಾತ್ರವಲ್ಲ, ಆಧುನಿಕ ಮಿಲಿಟರಿ ಇತಿಹಾಸದಲ್ಲೂ ದಾಖಲಾಗಿದೆ(Prepare Or Perish-page76). ಅಂದರೆ ಪಾಂಗಾಂಗ್ ಮಾತ್ರವಲ್ಲ ಮಾನಸ ಸರೋವರವೂ ಒಂದು ಕಾಲದಲ್ಲಿ ಭಾರತೀಯರ ಅನದಲ್ಲಿದ್ದ ಭೂಭಾಗವಾಗಿತ್ತು ಎನ್ನುವುದಕ್ಕೆ ಭರಪೂರ ಸಾಕ್ಷಿಗಳಿವೆ ಎಂದಾಯಿತು. ಅಷ್ಟೇ ಅಲ್ಲ, ೧೮೪೨ರಲ್ಲಿ ಜೊರಾವರ ಸಿಂಹನಿಗೆ ಹೆದರಿದ ಟಿಬೇಟ್ ಶಾಂತಿ ಮಾತುಕತೆಗೆ ಮುಂದಾಯಿತು. ಜೊತೆಗೆ ಟಿಬೇಟ್ ಎಡವಟ್ಟೊಂದನ್ನು ಮಾಡಿಕೊಂಡಿತು. ಏಕೆಂದರೆ ಮಾತುಕತೆಯಲ್ಲಿ ಒಂದೆಡೆ ಜೊರಾವರ ಸಿಂಹ ಕುಳಿತಿದ್ದರೆ ಇನ್ನೊಂದೆಡೆ ಲ್ಹಾಸಾದ ದಲೈ ಲಾಮಾನೊಂದಿಗೆ ಸ್ವತಃ ಚೀನಾದ ಅರಸ ಕುಳಿತಿದ್ದ! ಇದು ಮುಂದಿನ ಭಯಾನಕ ಇತಿಹಾಸವೊಂದಕ್ಕೆ ಸಾಕ್ಷಿಯಾಗಲಿದೆ ಎಂಬುದು ಅಂದು ಟಿಬೇಟಿನ ಲಾಮಾನಿಗೂ ಗೊತ್ತಿರಲಿಲ್ಲ, ಜೊರಾವರ ಸಿಂಹನಿಗೂ ಗೊತ್ತಿರಲಿಲ್ಲ. ಚೀನಾದ ಅರಸ ಮಾತುಕತೆಯನ್ನು ಎಷ್ಟೊಂದು ಎಳೆದನೆಂದರೆ ಶ್ರೀನಗರದಿಂದ ದಿವಾನ್ ಹರಿಚಂದ್ ಮತ್ತು ವಜೀರ ರತನು ಆಗಮಿಸಿ ಟಿಬೇಟಿನ ಹಕ್ಕನ್ನು ಸಂಪೂರ್ಣ ಬಿಟ್ಟುಕೊಡಬೇಕಾಯಿತು. ಭಾರತ ಹಾಗೆ ಮಾಡಲು ಇದ್ದ ಏಕೈಕ ಕಾರಣ ಟಿಬೇಟಿನ ಸಾಂಸ್ಕೃತಿಕ ಬೇರುಗಳು ಮತ್ತು ಲಾಮಾನ ಸಾತ್ವಿಕತೆ. ಮುಂದೆ ಬ್ರಿಟಿಷ್ ಆಳ್ವಿಕೆಯಲ್ಲಿ ಕೂಡಾ ಲಡಾಕಿನ್ನು ಕಾಶ್ಮೀರದ್ದು ಎಂದು ತೀರ್ಮಾನಿಸಿ ಗಡಿ ಕೂಡಾ ನಿರ್ಧರಿಸಲಾಗಿತ್ತು. ಅದಕ್ಕೆ ಆಸ್ಥೆ ವಹಿಸಿದ್ದವನು ಬ್ರಿಟಿಷ್ ಕಮಿಷನರ್ ಕನ್ನಿಂಗ್ ಹ್ಯಾಂ. ಅಲ್ಲಿಗೆ ಎಲ್ಲವೂ ಮುಗಿಯಿತು ಎಂದು ಭಾರತ ಭಾವಿಸಿತ್ತು. ಆದರೆ ಅಸಲಿ ಸಂಗತಿ ಆರಂಭವಾಗಿದ್ದೇ ಅಲ್ಲಿಂದ.

ಮತ್ತಷ್ಟು ಓದು »